ಬೆಂಗಳೂರು: ಆನೇಕಲ್ನಲ್ಲಿ ಪುಡಿರೌಡಿಗಳ ಅಟ್ಟಹಾಸ ಮುಂದುವರೆದಿದ್ದು ಅಂಗಡಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದನ್ನು ಅಂಗಡಿ ಮಾಲೀಕ ಪ್ರಶ್ನೆ ಮಾಡಿದ್ದಕ್ಕೆ ಮಾರಕಾಸ್ತ್ರಗಳನ್ನು ಹಿಡಿದು ದಮ್ಕಿ ಹಾಕಿರುವ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಆನೇಕಲ್ ತಾಲೂಕಿನ ಇಂಡ್ಲವಾಡಿ ಕ್ರಾಸ್ಬಳಿ ಇರುವ ಭೈರವೇಶ್ವವರ ಪ್ರಾವಿಜನ್ ಅಂಗಡಿಗೆ ಯುವಕರ ವಾಹನ ಡಿಕ್ಕಿಯಾಗಿದೆ. ಇದನ್ನು ಕಂಡು ಅಂಗಡಿಯಲ್ಲಿದ್ದ ಶಿವು ಎಂಬಾತ ಯುವಕರನ್ನು ಪ್ರಶ್ನಿಸಿದ್ದಾನೆ. ಇದಕ್ಕೆ ಹುಡುಗರನ್ನು ಕರೆಸಿ ಮಾರಕಾಸ್ತ್ರಗಳನ್ನು ಹಿಡಿದು ಶಿವು ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿ ಧಮ್ಕಿ ಹಾಕಿದ್ದಾರೆ.
ಇದನ್ನೂ ಓದಿ: ಹುಲಿಗೆಮ್ಮ ದೇವಿ ದರ್ಶನ ಪಡೆದು ಮನೆಗೆ ಹೊರಟವರು ಮಸಣಕ್ಕೆ! ಸ್ಥಳದಲ್ಲೇ ಮೂವರು ಸಾವು
ತಲೆ ಮತ್ತು ಕೈಗೆ ಗಂಭೀರವಾಗಿ ಗಾಯಗಳಾಗಿದ್ದ ಶಿವು ಎಂಬಾತನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.