ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ನ 68ನೇ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳಿಗೂ ಇದು ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ. ಇಂದು ಗೆದ್ದ ತಂಡ ಪ್ಲೇಆಫ್ಗೆ ಅರ್ಹತೆ ಪಡೆಯಲಿದೆ.
ಆರ್ಸಿಬಿ ಆಡಿರುವ 13 ಪಂದ್ಯಗಲ್ಲಿ 6 ಗೆಲುವು ಹಾಗೂ 7 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಚೆನ್ನೈ ಸಹ 13 ಪಂದ್ಯಗಳನ್ನು ಆಡಿದ್ದು 7 ಗೆಲುವು ಹಾಗೂ 6 ಪಂದ್ಯಗಳಲ್ಲಿ ಸೋಲು ಕಂಡಿದೆ. ಚೆನ್ನೈ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ 7ನೇ ಸ್ಥಾನದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿ.ಕೀ.), ಯಶ್ ದಯಾಳ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್
ಆರ್ಸಿಬಿ ಇಂಪ್ಯಾಕ್ಟ್ ಪ್ಲೇಯರ್ಸ್ : ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಜಯ್ಕುಮಾರ್ ವೈಶಾಕ್, ಹಿಮಾಂಶು ಶರ್ಮಾ
ಚೆನ್ನೈ ಸೂಪರ್ ಕಿಂಗ್ಸ್
ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂ.ಎಸ್. ಧೋನಿ (ವಿ.ಕೀ.), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ
ಚೆನ್ನೈ ಇಂಪ್ಯಾಕ್ಟ್ ಪ್ಲೇಯರ್ಸ್ : ಶಿವಂ ದುಬೆ, ಸಮೀರ್ ರಿಜ್ವಿ, ಪ್ರಶಾಂತ್ ಸೋಲಂಕಿ, ಶೇಕ್ ರಶೀದ್, ಮುಖೇಶ್ ಚೌಧರಿ