ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯುತ್ತಿರುವ ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ.
ಆರ್ಸಿಬಿ ಜೆರ್ಸಿ ಧರಿಸಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನಟ ಶಿವಣ್ಣ ಆಗಮಿಸಿದ್ದಾರೆ. ಆರ್ಸಿಬಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್ಗೆ ಜಾರಿದ ನಟ ಶಿವಣ್ಣ ಪಂದ್ಯ ವೀಕ್ಷಿಸುತ್ತಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ. ತಮ್ಮ ಜೋಗಯ್ಯ ಸಿನಿಮಾದ ಡೈಲಾಗ್ ರೀತಿಯಲ್ಲೇ ಆರ್ಸಿಬಿಗೆ ವಿಶ್ ಮಾಡಿದ್ದಾರೆ. ‘ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್ಸಿಬಿ ಹುಡುಗರೇ..’ ಎಂದು ಪೋಸ್ಟ್ ಮಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದ್ದು, ತಂಡಕ್ಕೆ ಉತ್ತಮ ಆರಂಭ ನೀಡಿದ್ದಾರೆ.
ಮಳೆಯಿಂದ ಪಂದ್ಯ ತಾತ್ಕಾಲಿಕ ಸ್ಥಗಿತ
ಆರ್ಸಿಬಿ 3 ಓವರ್ಗಳಿಗೆ ವಿಕೆಟ್ ನಷ್ಟವಿಲ್ಲದೇ 31 ರನ್ ಗಳಿಸಿದೆ. ಈ ವೇಳೆ 4ನೇ ಓವರ್ ಆರಂಭಕ್ಕೂ ಮೊದಲೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ, ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ನಿಂತ ಬಳಿಕ ಮತ್ತೆ ಪಂದ್ಯ ಆರಂಭವಾಗಲಿದೆ. ವಿರಾಟ್ ಕೊಹ್ಲಿ 19 ಹಾಗೂ ಡು ಪ್ಲೆಸಿಸ್ 12 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ @RCBTweets ಹುಡುಗರೇ.. #PlayBold #RCBvsCSK pic.twitter.com/0zHVO0xGJc
— DrShivaRajkumar (@NimmaShivanna) May 18, 2024