Thursday, September 19, 2024

ಅಂಜಲಿ ಹತ್ಯೆ ಪ್ರಕರಣ CIDಗೆ ಹಸ್ತಾಂತರ : ಸಚಿವ ಪರಮೇಶ್ವರ್

ಹುಬ್ಬಳ್ಳಿ : ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು CIDಗೆ ಹಸ್ತಾಂತರ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​​​​​ ತಿಳಿಸಿದ್ದಾರೆ.

ಇಂದು ಅಂಜಲಿ ಅಂಬಿಗೇರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಮಾಜದಲ್ಲಿ ಇಂತಹ ಪ್ರಕರಣಗಳು ಆಗಬಾರದು. ಆರೋಪಿಗೆ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಮೂಲ ಉದ್ದೇಶ ಎಂದು ಹೇಳಿದ್ದಾರೆ.

ಅಂಜಲಿ ಕುಟುಂಬ ಅತ್ಯಂತ ಬಡ ಕುಟುಂಬ. ಅಜಂಲಿಯನ್ನು ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ ಎಂಬ ಬಗ್ಗೆ ಕಂಡು ಹಿಡಿಯಬೇಕಾಗುತ್ತೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಈ ಪ್ರಕರಣವನ್ನು ಸಿಐಡಿಗೆ ನೀಡಲಾಗುತ್ತೆ ಎಂದು ತಿಳಿಸಿದ್ದಾರೆ.

ನಾವು ಫೋನ್ ಟ್ಯಾಪ್ ಮಾಡಿಲ್ಲ

ಪೊಲೀಸ್ ಇಲಾಖೆಯಿಂದ ಯಾವುದೇ ಫೋನ್ ಟ್ಯಾಪ್ ಮಾಡಿಲ್ಲ ಎಂದು ಗೃಹ ಸಚಿವ ಜಿ‌. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕುಮಾರಸ್ವಾಮಿಯವರ ಬಳಿ ದಾಖಲೆ ಇದ್ದರೆ ಕೊಡಲಿ. ಖಾಸಗಿಯವರು ಟ್ಯಾಪ್ ಮಾಡಿದ್ರೆ ದೂರು ಕೊಡಲಿ. ಕುಮಾರಸ್ವಾಮಿ ದೂರು ನೀಡಿದ್ರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಯಾವುದೇ ಫೋನ್ ಟ್ಯಾಪಿಂಗ್ ಮಾಡಿಲ್ಲ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES