ಬೆಳಗಾವಿ: ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ 2 ಗುಂಪುಗಳ ಮಧ್ಯೆ ಘರ್ಷಣೆ ನಡೆದಿರೋ ಘಟನೆ ಬೆಳಗಾವಿ ನಗರ ಆಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಚಿಕ್ಕ ಮಕ್ಕಳ ನಡುವೆ ಗಲ್ಲಿಯಲ್ಲಿ ಕ್ರಿಕೆಟ್ ಆಡುವ ವಿಚಾರಕ್ಕೆ ಗಲಾಟೆ ಆಗಿದೆ. ಆ ಗಲಾಟೆ ವೇಳೆ ಮಧ್ಯಪ್ರವೇಶಿಸಿದ ಯುವಕರ ಗುಂಪು ಗಲಾಟೆ ಮಾಡಿಕೊಂಡಿದ್ದು, 8 ಜನರಿಗೆ ಗಾಯವಾಗಿದೆ. ಅಷ್ಟೇ ಅಲ್ಲ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ತಲ್ವಾರ್ ಪ್ರದರ್ಶನ ಕೂಡ ಮಾಡಲಾಗಿದೆ. ಈ ಗಲಾಟೆಯಲ್ಲಿ ಪೊಲೀಸ್ ಪೇದೆಗೂ ಗಾಯವಾಗಿದೆ.
ಇದನ್ನೂ ಓದಿ: ಜೂನ್ 1ರಿಂದಲೇ ರಾಜ್ಯದಲ್ಲಿ ಮಾನ್ಸೂನ್ ಮಳೆ ಆರಂಭ: ಹವಾಮಾನ ಇಲಾಖೆ ಎಚ್ಚರಿಕೆ
ಘಟನೆಯಲ್ಲಿ ಎರಡೂ ಗುಂಪಿನ 8 ಜನರಿಗೆ ಗಾಯವಾಗಿದ್ದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 10 ಜನರನ್ನ ಬಂಧಿಸಲಾಗಿದೆ. ತಲ್ವಾರ್ ಪ್ರದರ್ಶನ ಹಾಗೂ ಕಲ್ಲು ತೂರಾಟ ಸಂಬಂಧ ಅನ್ಯಕೋಮಿನ 14 ಜನ, 13 ಹಿಂದೂಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.