ಬೆಂಗಳೂರು: ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಅನ್ನಭಾಗ್ಯ ಯೋಜನೆಯಡಿ ನಾಲ್ಕು ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಅಕ್ಕಿಗೆ 660 ಕೋಟಿ ರು. ಜಮೆ ಮಾಡಲಾಗುತ್ತಿದೆ. ಆದರೆ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನ ಹಣದಲ್ಲಿ ನಯಾಪೈಸೆಯನ್ನೂ ಈವರೆಗೆ ಜಮೆ ಮಾಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಇದನ್ನೂ ಓದಿ: ಮೇ 29ರ ವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
ಬ್ಯಾಂಕ್ ಖಾತೆಗೆ ಜಮೆ ಮಾಡದಿರಲು ತಾಂತ್ರಿಕ ದೋಷವೇ ಕಾರಣವೆಂದು ಆಹಾರ ಇಲಾಖೆ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ ಈ ತಾಂತ್ರಿಕ ದೋಷ ಅಡ್ಡಿಯುಂಟು ಮಾಡಿಲ್ಲ. ಪ್ರತಿ ತಿಂಗಳು ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯವಾಗುತ್ತಿದೆ. ಅನ್ನಭಾಗ್ಯ ಯೋಜನೆಯ ಹಣ ನೇರ ಪಾವತಿಗೆ ನಿಜವಾಗಿಯೂ ತಾಂತ್ರಿಕ ದೋಷ ಕಾರಣವೇ ಎಂಬುದು ಹಲವರು ಪ್ರಶ್ನಿಸುತ್ತಿದ್ದಾರೆ.