ಬೆಂಗಳೂರು: ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ಒಂದು ತಿಂಗಳಿಗೂ ಹೆಚ್ಚು ಕಾಲ ತಲೆ ಮರೆಸಿಕೊಂಡಿದ್ದ ಕಾಮಾಂಧ ಕೊನೆಗೂ ಬೆಂಗಳೂರಿಗೆ ಆಗಮಿಸುತ್ತಿದ್ದಾನೆ.
ಜರ್ಮಿನಿಯ ಮ್ಯೂನಿಚ್ನಿಂದ ಮಧ್ಯಾಹ್ನ 2.30ಕ್ಕೆ ಟೇಕ್ ಆಫ್ ಆದ ವಿಮಾನದಲ್ಲಿ ಪ್ರಜ್ವಲ್ ಪ್ರಯಾಣ ಬೆಳೆಸಿದ್ದು ಇಂದು ಮಧ್ಯರಾತ್ರಿ 12.30ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗಲಿದ್ದಾನೆ.
ಬೆಂಗಳೂರು ಏರ್ಪೋರ್ಟ್ನಲ್ಲಿ SIT ಸಿದ್ಧತೆ:
ಜರ್ಮನಿಯಿಂದ ಮ್ಯೂನಿಕ್ನಿಂದ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮಿಸಲಿದ್ದು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಸದ ಪ್ರಜ್ವಲ್ ಬಂಧನಕ್ಕೆ SIT ತಂಡ ಫುಲ್ ಅಲರ್ಟ್ ಆಗಿದೆ. ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ SIT ಅಧಿಕಾರಿಗಳು ಭೇಟಿ ನೀಡಿ ಏರ್ಪೋರ್ಟ್ನ ಇಮಿಗ್ರೇಷನ್ ಬಳಿ ತೆರಳಿ ಪ್ರಜ್ವಲ್ ಆಗಮದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ಏರ್ಪೋರ್ಟ್ಗೆ ಬರ್ತಿದ್ದಂತೆ ಪ್ರಜ್ವಲ್ ಅರೆಸ್ಟ್ ಮಾಡಲು SIT ಅಧಿಕಾರಿಗಳು ಸಜ್ಜಾಗಿದ್ದಾರೆ.
ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಹಾಸನ ಚಲೋ:
ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳನ್ನು ಖಂಡಿಸಿ ಅಮಾಯಕ ಹೆಣ್ಣುಮಕ್ಕಳ ಬಾಳನ್ನು ಹಾಳು ಮಾಡಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಹಾಸನದಲ್ಲಿ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಪ್ರಗತಿಪರರು, ಪ್ರತಿಭಟನಾಕಾರರು ಆಗಮಿಸಿ ಪ್ರತಿಭಟಿಸಿದರು.