ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು ಬೆಸ್ಕಾಂ ಹೆಲ್ಪ್ಲೈನ್ಗೆ ಎಂಟು ಸಾವಿರಕ್ಕೂ ಅಧಿಕ ದೂರುಗಳು ಬಂದಿರುವುದು ವರದಿಯಾಗಿದೆ.
ರಾಜ್ಯ ಹವಾಮಾನ ಇಲಾಖೆಯೂ ರಾಜ್ಯದ್ಯಂತ ಜೂನ್ ಮೊದಲವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ನೀಡಿತ್ತು. ಈ ಹಿನ್ನೆಲೆ ಯಾವುದೇ ವಿದ್ಯುತ್ ಅವಘಡಗಳು ಸಂಭವಿಸಿದರೂ ಬೆಸ್ಕಾಂ ಹಲ್ಪ್ ಲೈನ್ಗೆ ಕರೆ ಮಾಡಿ ದೂರು ನೀಡುವಂತೆ ಅಧಿಕಾರಿಗಳು ತಿಳಿಸಿದ್ದರು.
ಇದನ್ನೂ ಓದಿ: ವರುಣಾರ್ಭಟ: ಮನೆಗಳಿಗೆ ನುಗ್ಗಿದ ಮಳೆ ನೀರು, ಕೆಲಕಚ್ಚಿದ 118 ಮರಗಳು
ಭಾನುವಾರ ರಾತ್ರಿ ಬೆಂಗಳೂರಿನಾದ್ಯಂತ ದಾಖಲೆ ಮಟ್ಟದ ಮಳೆ ಸುರಿದ ಹಿನ್ನೆಲೆ ನಗರದ ಹಲವೆಡೆ ವಿದ್ಯುತ್ ಕಂಬಗಳು ಮುರಿದುಬಿದ್ದಿದ್ದು ಭಾರಿ ಅವಘಡಗಳು ಸಂಭವಿಸಿದ ಹಿನ್ನೆಲೆ ಬೆಸ್ಕಾಂನ ಹೆಲ್ಪ್ಲೈನ್ 1912ಗೆ ಬರೊಬ್ಬರಿ 8745 ದೂರುಗಳು ಬಂದಿರುವುದು ವರದಿಯಾಗಿದೆ.
ಬೆಂಗಳೂರಿನ ಹಲವೆಡೆ ಸುರಿದ ಮಳೆಯಿಂದಾಗಿ 74 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದಿವೆ, 9 ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗಿದೆ ಇದರೊಂದಿಗೆ ಬೆಸ್ಕಾಂಗೆ ಕೋಟ್ಯಾಂತರ ರೂ. ಗಳಷ್ಟು ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.