ರಾಮನಗರ: ರಾಜ್ಯದಲ್ಲಿ ಹೈಓಲ್ಟೇಜ್ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಸಿ.ಎನ್. ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಇದೀಗ ಬಿಜೆಪಿ ಪಾಲಾಗಿದೆ.
ಡಿಕೆ ಸುರೇಶ್ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 2,29,947 ಮತಗಳಿಗೂ ಹೆಚ್ಚು ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಡಾ. ಸಿಎನ್ ಮಂಜುನಾಥ್ 9,54,560 ಮತಗಳನ್ನು ಗಳಿಸಿದರೆ, ಡಿಕೆ ಸುರೇಶ್ 7,50,886 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿ ಸೋಲೊಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಚಿದ್ರ: 25 ವರ್ಷಗಳ ಬಳಿಕ ಕಾಂಗ್ರೆಸ್ ಪತಾಕೆ
ಈ ಬಾರಿಯ ಚುನಾವಣೆಯಲ್ಲಿ ಇಲ್ಲಿ 15 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಇದರಲ್ಲಿ ಹಾಲಿ ಸಂಸದ, ಕಾಂಗ್ರೆಸ್ನ ಡಿಕೆ ಸುರೇಶ್ ಹಾಗೂ ಖ್ಯಾತ ವೈದ್ಯ, ಜಯದೇವ ಆಸ್ಪತ್ರೆಯ ಮಾಜಿ ಮುಖ್ಯಸ್ಥ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.
ಈ ಬಾರಿಯ ಚುನಾವಣೆಯಲ್ಲಿ ಇಲ್ಲಿ 15 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಇದರಲ್ಲಿ ಹಾಲಿ ಸಂಸದ, ಕಾಂಗ್ರೆಸ್ನ ಡಿಕೆ ಸುರೇಶ್ ಹಾಗೂ ಖ್ಯಾತ ವೈದ್ಯ, ಜಯದೇವ ಆಸ್ಪತ್ರೆಯ ಮಾಜಿ ಮುಖ್ಯಸ್ಥ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.