ಬೆಂಗಳೂರು: ಮೈಸೂರಿನ ಕೆ.ಆರ್ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಹೊಳೆ ನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಇಂದು ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದೂ ಭವಾನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಕೆ.ಆರ್ ನಗರ ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಭವಾನಿ ರೇವಣ್ಣ, ಅನಾರೋಗ್ಯದ ಕಾರಣ ನೀಡಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಮನವಿಯನ್ನು ಪುರಸ್ಕರಿಸಿದ್ದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಬೆಂಗಳೂರಿನ ಕೋರ್ಟ್ನಲ್ಲಿಂದು ರಾಹುಲ್ ಗಾಂಧಿ ವಿಚಾರಣೆ
ಇದೇ ವೇಳೆ, ಕಿಡ್ನಾಪ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಸಹಕರಿಸುವಂತೆ ಸೂಚನೆ ನೀಡಿದ ನ್ಯಾಯಾಲಯವು ಮಧ್ಯಾಹ್ನ 1 ಗಂಟೆ ವೇಳೆಗೆ ಎಸ್ಐಟಿ ಎದುರು ಹಾಜರಾಗುವಂತೆ ತಿಳಿಸಿದೆ.
ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ಗೆ ಸಂಬಂಧಿಸಿ ಭವಾನಿ ರೇವಣ್ಣ ಅವರನ್ನು ಎಸ್ಐಟಿ ತನಿಖೆಗೆ ಕರೆದಿತ್ತು. ಆದರೆ ಬಂಧನದ ಭೀತಿಯಲ್ಲಿದ್ದ ಭವಾನಿ ತನಿಖೆಗೆ ಸಹಕರಿಸದೆ ಕಣ್ಮರೆಯಾಗಿದ್ದರು. ನಂತರ ಎಸ್ಐಟಿ ತಂಡ ಅವರನ್ನು ಬಂಧಿಸಲು ಮುಂದಾಗಿತ್ತು. ಆದರೆ ಭವಾನಿಯವರು ಎಲ್ಲೂ ಸಿಕ್ಕಿರಲಿಲ್ಲ. ಇದೀಗ ಹೈಕೋರ್ಟ್ ಏಕಸದಸ್ಯ ಪೀಠದಿಂದ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತನಿಖೆಗೆ ಸಹಕರಿಸುವಂತೆ ಕೋರ್ಟ್ ಹೇಳಿದೆ.