ಬೆಂಗಳೂರು: ಮೈಸೂರಿನ ಕೆ.ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ SIT ಮುಂದೆ ವಿಚಾರಣೆಗೆ ಹಾಜರಾದ ಆರೋಪಿ ಭವಾನಿ ರೇವಣ್ಣ ತಮ್ಮ ಮಗನನ್ನು ಕಂಡು ಗಳಗಳನೆ ಕಣ್ಣೀರಿಟ್ಟಿರುವ ಘಟನೆ ಇಂದು ನಡೆದಿದೆ.
ಕಿಡ್ನಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು, ಈ ಅರ್ಜಿ ವಿಚಾರಣೆ ಇಂದು ನಡೆಯಿತು. ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲವು ಮಂಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಇಂದು ಮಧ್ಯಾಹ್ನ 1ಗಂಟೆ ವೇಳೆಗೆ SIT ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಇದನ್ನೂ ಓದಿ: ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ನಿರೀಕ್ಷಣಾ ಜಾಮೀನು ಮಜೂರು
ನ್ಯಾಯಾಲಯದ ಸೂಚನೆ ಮೇರೆಗೆ SIT ಮುಂದೆ ವಿಚಾರಣೆಗೆ ಭವಾನಿ ರೇವಣ್ಣ ಹಾಜರಾದರು. SIT ಅಧಿಕಾರಿಗಳು ಸತತ ಒಂದು ಗಂಟೆಗೂ ಹೆಚ್ಚು ಕಾಲ ಭವಾನಿ ವಿಚಾರಣೆ ನಡೆಸಿದರು. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸದ ಭವಾನಿ, ಈ ಕಿಡ್ನಾಪ್ಗೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಮೊದಲು ನನ್ನ ಮಗನನ್ನು ನೋಡಬೇಕು ಎಂದು ಬೇಡಿಕೊಂಡಿದ್ದಾರೆ.
ಈ ವೇಳೆ ಮಗನನ್ನು ನೋಡಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು. ಮಗನನ್ನು ಕಂಡ ತಾಯಿ ಒಂದೇ ಸಮನೆ ಗಳ ಗಳನೆ ಅತ್ತು ಕಣ್ಣೀರಿಟ್ಟಿದ್ದಾರೆ. ಇತ್ತ ತಾಯಿ ಕಣ್ಣೀರಿಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕೂಡ ಅತ್ತು ನೀರಾಗಿದ್ದಾರೆ.