Friday, September 20, 2024

ವಾಟರ್‌ ಟ್ಯಾಂಕರ್ ಡಿಕ್ಕಿ: ಅಕ್ಕ, ತಮ್ಮನ ತಲೆ ಮೇಲೆ ಹರಿದ ಟ್ಯಾಂಕರ್​

ಆನೇಕಲ್: ವಾಟರ್ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ನಡೆದಿದೆ.

ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿ ಮಧುಮಿತಾ, ರಂಜನ್ ಮೃತ ದುರ್ದೈವಿಗಳು. ಮದುಮಿತಾ ಬೆಂಗಳೂರಿನ ಎಸ್ಎಸ್ಎಂಆರ್​ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನ ಮೊದಲ ದಿನ ಹಿನ್ನೆಲೆಯಲ್ಲಿ ಅಕ್ಕ ಮದುಮಿತಾರನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ರಂಜನ್​ ಹೋಗುತ್ತಿದ್ದನು. ಈ ವೇಳೆ ವೇಗವಾಗಿ ಬಂದ ವಾಟರ್​​ ಟ್ಯಾಂಕರ್​ ಡಿಕ್ಕಿ ಹೊಡೆದಿದೆ. ಪರಿಣಾಮ ಅಕ್ಕ ಮತ್ತು ತಮ್ಮ ಬೈಕ್​ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ವಾಟರ್​ ಟ್ಯಾಂಕರ್​ನ ಹಿಂಬದಿ ಚಕ್ರ​ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:  ಚಂದನ್​ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯ!

ವಾಟರ್ ಟ್ಯಾಂಕರ್ ಬೈಕ್​ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES