ಬೆಂಗಳೂರು: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್ನನ್ನೂ ಎಸ್ಐಟಿ ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ.
ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್ನನ್ನು ಎಸ್ಐಟಿ ಬಂಧಿಸಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು. ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ.
ಇದನ್ನೂ ಓದಿ: ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ನಿರೀಕ್ಷಣಾ ಜಾಮೀನು ಮಜೂರು
ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪ ಕೂಡ ಇದೆ. ಭವಾನಿ ಸೂಚನೆ ಮೇರೆಗೆ ಅಜಿತ್ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದ ಎನ್ನಲಾಗಿತ್ತು. ಕಿಡ್ನ್ಯಾಪ್ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್ಐಟಿ ಎಫ್ಐಆರ್ ದಾಖಲಿಸಿತ್ತು.