ಬೆಂಗಳೂರು: ನಟ ಶಿವರಾಜ್ಕುಮಾರ್ ಜಾತ್ರೆಗಳಲ್ಲಿ ಬಂದು ಕುಣಿಯಲಿ ಎಂದು ಟೀಕಿಸಿದ್ದ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಇಂದು ಶಿವರಾಜ್ ಕುಮಾರ್ ಅಭಿಮಾನಿಗಳು ಮುತ್ತಿಗೆ ಹಾಕಿದರು.
ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಶಿವರಾಜ್ ಅಭಿಮಾನಿಗಳ ಸಂಘ, ರಾಜ್ ಕುಮಾರ್ ಅಭಿಮಾನಿಗಳ ಸಂಘ, ಕನ್ನಡಪರ ಸಂಘಟನೆಗಳಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಒದನ್ನೂ ಓದಿ: ಒಂದೇ ಕುಟುಂಬದ ನಾಲ್ವರಿಂದ ಸಾಮೂಹಿಕ ಆತ್ಮಹತ್ಯೆಗೆ ಯತ್ನ
ಇದೇ ವೇಳೆ ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಮನೆ ಬಾಗಿಲಿನಿಂದ ಹೊರ ಹೋಗುವಂತೆ ಪೊಲೀಸರು ನಟನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ KSRP ತುಕಡಿ ಆಗಮಿಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕುಮಾರ್ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಓಡಿ ಹೋಗ್ತಿದ್ದ ಪ್ರತಿಭಟನಾಕಾರರನ್ನ ಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಪಾರ್ಕ್ ಸುತ್ತಮುತ್ತ ನಿಂತಿದ್ದ ಪ್ರತಿಭಟನಾಕಾರರನ್ನ ಕೂಡ ವಶಕ್ಕೆ ಪಡೆದಿದ್ದಾರೆ.