ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ -5 ನ ಸ್ಪರ್ಧಿಗಳಾದ ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ಅವರು ತಮ್ಮ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಟ್ಟಿದ್ದು ನಾಲ್ಕು ವರ್ಷದ ದಾಂಪತ್ಯಕ್ಕೆ ಈ ಜೋಡಿ ದಿಢೀರ್ ಎಂಡ್ ಕಾರ್ಡ್ ಹಾಕಿದ್ದಾರೆ.
ಈ ಇಬ್ಬರ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಿತ್ತು. ರೀಲ್ಸ್ಗಳ ಮೂಲಕ ಬಾರಿ ಸದ್ದು ಮಾಡುತ್ತಿದ್ದರು. ಇವರ ರೀಲ್ಸ್ ಗೆ ಸಾವಿರಾರು ಲೈಕ್ಸ್ ಕಮೆಂಟ್ಸ್ಗಳು ಕೂಡ ಹರಿದು ಬರುತ್ತಿದ್ದವು. ಇಷ್ಟು ಅನ್ಯೋನ್ಯವಾಗಿದ್ದ ಈ ಜೋಡಿ ಇದೀಗ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿರುವುದು ಅಭಿಮಾನಿಗಳಿಗೆ ಶಾಕ್ ಉಂಟುಮಾಡಿದೆ.
ಇದನ್ನೂ ಓದಿ: ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯ!
ಇನ್ನು, ಒಂದೇ ದಿನದಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡಗೆ ಡಿವೋರ್ಸ್ ಸಿಕ್ಕಿದ್ದು ಹೇಗೆ ಎಂಬುವುದರ ಬಗ್ಗೆ ವಕೀಲೆ ಅನಿತಾ ಪವರ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಇಬ್ಬರು ಆರು ತಿಂಗಳ ಹಿಂದೆ ಡಿವೋರ್ಸ್ ನಿರ್ಧಾರ ಮಾಡಿದ್ದರು. ಇಬ್ಬರು ಒಪ್ಪಿಗೆಯಿಂದಲೇ ವಿಚ್ಛೇದನ ತೆಗೆದುಕೊಂಡಿದ್ದಾರೆ. ಈ ಇಬ್ಬರ ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದೆ. ಯಾವುದೇ ಕಂಡಿಷನ್, ಬೇಡಿಕೆ ಏನು ಇರಲಿಲ್ಲ. ಭವಿಷ್ಯದ ಕಾರಣಕ್ಕೆ ಒಟ್ಟಾಗಿ ಹೋಗಲು ಸಾಧ್ಯವಿಲ್ಲ ಅಂತ ನಿರ್ಧರಿಸಿದ್ದಾರೆ. ಹೀಗೆ ಮಾತನ್ನು ಮುಂದುವರೆಸಿದ ಅವರು, ಈ ಪ್ರಕ್ರಿಯೆಯನ್ನು ಕಾನೂನುಬದ್ಧವಾಗಿಯೇ ನಡೆದಿದೆ. ಜೊತೆಗೆ ಇರಲು ಸಾಧ್ಯವೇ ಇಲ್ಲ ಅಂದ್ರೆ ವಿಚ್ಛೇದನ ಪಡೆಯಬಹುದು ಅಂತ ಕಾನೂನಿನಲ್ಲಿದೆ.
ಅಮರ್ ದೀಪ್ ವರ್ಸಸ್ ಅರವಿಂದ್ ಕೌರ್ ಅಂತ ಒಂದು ಜಡ್ಜ್ ಮೆಂಟ್ ಇದೆ. ಅದೇ ಪ್ರಕಾರ ನಾವು ಈ ಕೇಸ್ ಹಾಕಿಕೊಂಡಿದ್ದೇವೆ. ಈ ಪ್ರಕ್ರಿಯೆ ಬೇಗ ಖಾತರಿ ಆಯ್ತು. ಫೈಲ್ ಮಾಡಿದ್ದು ಜೂನ್ 6ಕ್ಕೆ. ಜೂನ್ 7ರಂದು ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕೋರ್ಟ್ ಮುಂದೆ ಹಾಜರು ಪಡೆಸಿದ್ದೆವು. ಈ ಹಿಂದೆಯೇ ಇಬ್ಬರು ನಿರ್ಧಾರ ಮಾಡಿಕೊಂಡಿದ್ದರು. ಹೀಗಾಗಿ ಈ ಪ್ರೋಸಿಜರ್ ಬೇಗ ಆಯ್ತು ಅಂತ ಹೇಳಿಕೊಂಡಿದ್ದಾರೆ.