ದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಮಂಡ್ಯ ಸಂಸದ ಹೆಚ್.ಡಿ ಕುಮಾರಸ್ವಾಮಿ ಯವರಿಗೆ ಆಹ್ವಾನ ಬಂದಿದ್ದು ಕೇಂದ್ರ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಲಾಗಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ಪಕ್ಷವು ಎನ್ಡಿಎಗೆ ಬೆಂಬಲ ಸೂಚಿಸಿದಂದಿನಿಂದಲೂ ಕುಮಾರಸ್ವಾಮಿ ಗೆದ್ದರೇ ಸಚಿವ ಸ್ಥಾನ ಸಿಗುವುದು ಗ್ಯಾರೆಂಟಿ ಅದರಲ್ಲೂ ಕೃಷಿ ಖಾತೆಯೇ ಸಿಗಲಿದೆ ಎಂದು ಹೇಳಲಾಗುತ್ತಿತ್ತು. ಆದರೇ ಕುಮಾರಸ್ವಾಮಿಗೆ ಕೃಷಿ ಖಾತೆ ಬದಲಿಗೆ ಪೆಟ್ರೋಲಿಯಂ ಖಾತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಇಂದು ಸಂಜೆ 7.15ಕ್ಕೆ ಮೋದಿ ಪದಗ್ರಹಣ: ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ
ಮೋದಿ 3.0 ಸರ್ಕಾರದಲ್ಲಿ ಕುಮಾರಸ್ವಾಮಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುತ್ತಿದೆ. ಈ ಹಿನ್ನೆಲೆ ಈಗಾಗಲೇ ಹೆಚ್ಡಿ ಕುಮಾರಸ್ವಾಮಿ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿ ತೆರಳಿದ್ದಾರೆ.
ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿ ಎಂದು ತಿಳಿಸಿದ್ದಾರೆ.