ಬೆಂಗಳೂರು: ಕನ್ನಡ ರ್ಯಾಪರ್, ಬಿಗ್ಬಾಸ್ ಕನ್ನಡ ಸೀಸನ್-5 ಸ್ಪರ್ಧಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್.7 ರಂದು ವಿಚ್ಚೇದನ ಪಡೆದು ಅವರ ಅಭಿಮಾನಿಗಳಿಗೆ ಶಾಕ್ ನಿಡಿದ್ದಾರೆ. ಇವರಿಬ್ಬರ ವಿಚ್ಚೇದನದ ಕುರಿತು ಮೊದಲ ಬಾರಿಗೆ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿ ಅವರು, ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ಇಬ್ಬರ ವೈಯಕ್ತಿಕ ವಿಚಾರಕ್ಕೆ ನಾನು ಕಾಮೆಂಟ್ ಮಾಡಲ್ಲ. ಲೈಫ್ ಇಸ್ ನಾಟ್ ಈಸಿ ಜೀವನದಲ್ಲಿ ಏರಿಳಿತಗಳು ಇರುತ್ತವೆ. ನಾವೇನು ಕಾಂಟ್ರಿಬ್ಯೂಟ್ ಮಾಡದೇ ಇದ್ದಮೇಲೆ, ನಾವೇನು ಕಾಮೆಂಟ್ ಮಾಡೋಕೆ ಹೋಗಬಾರದು ಎಂದು ನಟಿ ಉತ್ತಿರಿಸಿದ್ದಾರೆ.
ಇದನ್ನೂ ಓದಿ: ಚಂದನ್ ಶೆಟ್ಟಿ-ನಿವೇದಿತಾ ಡೈವೋರ್ಸ್: ನಟ ಪ್ರಥಮ್ ಪ್ರತಿಕ್ರಿಯೆ
ಬಿಗ್ ಬಾಸ್ ಕನ್ನಡ ಸೀಸನ್ -5 ಬಳಿಕ ಖ್ಯಾತಿ ಗಳಿಸಿದ್ದ ಈ ಇಬ್ಬರು 2020ರಲ್ಲಿ ಎರಡು ಕುಟುಂಬಗಳ ಒಪ್ಪಿಗೆ ಮೇರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಷ್ಟು ದಿನಗಳ ಕಾಲ ಅನ್ಯೋನ್ಯವಾಗಿದ್ದ ಅವರು, ಸೋಶಿಯಲ್ ಮೀಡಿಯಾದಲ್ಲೂ ಫುಲ್ ಆ್ಯಕ್ಟೀವ್ ಆಗಿದ್ದರು. ನಟಿ ನಿವೇದಿತಾ ಗೌಡ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಆಗಾಗ ತಮ್ಮ ಪೋಸ್ಟ್ ಹಾಗೂ ರೀಲ್ಸ್ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು.
ಹಿಂದೊಮ್ಮೆ ಅಂಡರ್ ವಾಟರ್ ಶೂಟ್ ಮಾಡಿರುವ ಜೋಡಿ ಲಿಪ್ ಕಿಸ್ ಮಾಡಿದ ರೊಮ್ಯಾಂಟಿಕ್ ವಿಡಿಯೊ ಶೇರ್ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್ ಕಮೆಂಟ್ ಕೂಡ ಮಾಡಿದ್ದರು. ಆದರೇ, ಈ ಜೋಡಿ ವಿಚ್ಚೇದನ ಪಡೆದಿರುವುದು ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ.