ಬೆಂಗಳೂರು: ಗೆಳತಿ ಪವಿತ್ರಾಗೌಡಗೆ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್ವುಡ್ ನಟ ದರ್ಶನ್ ನನ್ನು ಕೊಲೆ ಆರೋಪದಡಿ ಇಂದು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ನಲ್ಲಿ ದರ್ಶನನ್ನು ಬಂಧನ ಮಾಡಲಾಗಿದೆ.
ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ!
ದರ್ಶನ ಜೊತೆಗಿನ ಫೋಟೋಗಳನ್ನು ದರ್ಶನ್ ಗೆಳತಿ ಪವಿತ್ರಾಗೌಡ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ಫೊಟೋಗಳಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಜೂನ್ 9 ರಂದು ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿಪಾಳ್ಯಕ್ಕೆ ಕರೆತಂದ ವಿನಯ್ ಎನ್ನುವವರ ಕಾರ್ ಶೆಡ್ ನಲ್ಲಿ ಇರಿಸಿ ದರ್ಶನ್ ಸಹಚರರು ರೇಣುಕಾಸ್ವಾಮಿಗೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಹಲ್ಲೆ ಮಾಡಿದ್ದರಿಂದ ಆತ ಸಾವಿಗೀಡಾಗಿದ್ದ. ಬಳಿಕ ಮೃತ ದೇಹವನ್ನು ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಬಿಸಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದು, ದರ್ಶನ್ ಬಗ್ಗೆ ನಟ ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.