ಬೆಂಗಳೂರು: ತಮ್ಮ ಪತ್ನಿ ನಾಗರತ್ನರಿಂದ ವಿಚ್ಚೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರೊಂದಿಗೆ ವಿಚ್ಚೇದನದ ನಿರೀಕ್ಷೆಯಲ್ಲಿದ್ದ ವಿಜಯ್ಗೆ ಭಾರಿ ಹಿನ್ನಡೆಯಾಗಿದೆ.
2018 ರಲ್ಲಿ ಬೆಂಗಳೂರಿನ ಶಾಂತಿನಗರದಲ್ಲಿರುವ ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯವು ದುನಿಯಾ ವಿಜಯ್ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ನಾಗರತ್ನರಿಗೆ ಜಯ ಸಿಕ್ಕ ಸಿಕ್ಕಂತಾಗಿದೆ.
ಇದನ್ನೂ ಓದಿ: ನಟ ದರ್ಶನ್, ಪವಿತ್ರಾ ಗೌಡರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ, ಕೋರ್ಟ್ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತಿತ್ತು.
ಕಳೆದ 6 ವರ್ಷಗಳಿಂದ ನಡೆಯುತ್ತಿದ್ದ ಡಿವೋರ್ಸ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, 2019ರಲ್ಲಿ ಮಹಿಳಾ ಆಯೋಗದ ಮುಂದೆ ನಟ ದುನಿಯಾ ವಿಜಯ್ ಹಾಜರಾಗಿ ವಿಚಾರಣೆ ವೇಳೆ ನಾಗರತ್ನ ಜೊತೆ ಬಾಳಲು ಇಷ್ಟವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಮಕ್ಕಳ ಜವಾಬ್ದಾರಿಗೆ ರೆಡಿ, ನಾಗರತ್ನಗೆ ಜೀವನಾಂಶ ಕೊಡಲು ಒಪ್ಪಿದ್ದರು. ಆದರೇ, ಪ್ರತಿ ಸಲ ಕೋರ್ಟ್ಗೆ ಬಂದಾಗಲೂ ಪತಿ ಬೇಕು ಎಂದು ನಾಗರತ್ನ ಹೇಳುತ್ತಿದ್ದರು. ಇದರಂತೆ ನಾಗರತ್ನ ಒಪ್ಪಿಗೆ ಇಲ್ಲದ ಹಿನ್ನೆಲೆ ದುನಿಯಾ ವಿಜಯ್ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.