ಬೆಂಗಳೂರು: ನಟ ದರ್ಶನ್ ಧರ್ಮಪತ್ನಿ ವಿಜಯಲಕ್ಷ್ಮಿ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಾಸ್ ಆಗಿದ್ದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ರೀ ಆ್ಯಕ್ಟೀವ್ ಆಗಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ನನ್ನು ವಶಕ್ಕೆ ಪಡೆದ ಬೆನ್ನಲ್ಲೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮನ್ನು ಫಾಲೋ ಮಾಡುತ್ತಿದ್ದ ಎಲ್ಲರನ್ನು ಅನ್ ಫಾಲೋ ಮಾಡಿದ್ದರು. ಬಳಿಕ ಡಿಲೀಟ್ ಮಾಡಿದ್ದರು. ಒಂದು ವಾರದ ಬಳಿಕ ಇದೀಗ ಮತ್ತೆ ಇನ್ಸ್ಟಾನಲ್ಲಿ ವಿಜಯ ಲಕ್ಷ್ಮೀ ದರ್ಶನ್ ಆ್ಯಕ್ಟಿವ್ ಆಗಿದ್ದಾರೆ.
ಆದರೇ, ಈ ಹಿಂದೆ ತಾವು ಮಾಡಿದ್ದ ಎಲ್ಲ ಪೋಸ್ಟ್ ಗಳನ್ನ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದ ಎಲ್ಲರನ್ನು ಅನ್ ಫಾಲೋ ಮಾಡಿದ್ದಾರೆ. ಇನ್ಸ್ಟಾ ಅಕೌಂಟ್ ನಲ್ಲಿ ವಿಜಿ ದರ್ಶನ್ ಎಂದೇ ಹೆಸರಿದೆ. ಬಯೋದಲ್ಲಿ ಕೂಡ ವಿಜಯಲಕ್ಷ್ಮಿ ದರ್ಶನ್ ಎಂದೇ ಇದೆ.
ಇದನ್ನು ಓದಿ: ರೇಣುಕಾಸ್ವಾಮಿ ಫ್ಯಾಮಿಲಿಗೆ, ಮಗುವಿಗೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್
ದರ್ಶನ್ ಪರ ವಕೀಲರನ್ನು ನೇಮಿಸಿದ್ದು ಪತ್ನಿ ವಿಜಯಲಕ್ಷ್ಮಿ:
ದರ್ಶನ್ ಅವರ ಜಾಮೀನಿನಾಗಿ ಅವರ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲರಾದ ರಂಗನಾಥ ರೆಡ್ಡಿ ಮತ್ತು ಅನಿಲ್ ಬಾಬು ಅವರನ್ನು ವಿಜಯಲಕ್ಷ್ಮಿ ಅವರೇ ನೇಮಿಸಿದ್ದು, ಈ ವಕೀಲರು ವಕಾಲತ್ತು ವಹಿಸಿರುವುದು ಸಹ ವಿಜಯಲಕ್ಷ್ಮಿ ಮತ್ತು ಅವರ ತಂದೆ-ತಾಯಿಯ ಮೂಲಕವೇ.
ವಿಜಯಲಕ್ಷ್ಮಿ ಅವರಿಂದ ನೇಮಿಸಲ್ಪಟ್ಟಿರುವ ವಕೀಲ ಅನಿಲ್ ಬಾಬು ಇತ್ತೀಚೆಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿ, ‘ಪೊಲೀಸ್ ಆಯುಕ್ತರು ಹಾಗೂ ಕೆಲವು ಮಾಧ್ಯಮಗಳು, ಪವಿತ್ರಾ ಗೌಡ ಅವರನ್ನು ದರ್ಶನ್ರ ಪತ್ನಿ ಎಂದು ಹೇಳುತ್ತಿರುವುದು ವಿಜಯಲಕ್ಷ್ಮಿ ಅವರಿಗೆ ತೀವ್ರ ಬೇಸರ ತಂದಿದೆ. ವಿಜಯಲಕ್ಷ್ಮಿ ಅವರೊಬ್ಬರೇ ದರ್ಶನ್ರ ಏಕೈಕ ಕಾನೂನುದಬದ್ಧ ಪತ್ನಿ, ಪವಿತ್ರಾ ಗೌಡ ಅಲ್ಲ, ಮಾಧ್ಯಮಗಳು ಪವಿತ್ರಾ ಅವರನ್ನು ದರ್ಶನ್ರ ಪತ್ನಿ ಎಂದು ಸಂಭೋದಿಸಬಾರದು’ ಎಂದಿದ್ದರು.