Saturday, September 28, 2024

ಕಳ್ಳಭಟ್ಟಿ ಸಾರಾಯಿ ಸೇವನೆ: ಮೃತರ ಸಂಖ್ಯೆ 37ಕ್ಕೆ ಏರಿಕೆ

ಚೆನ್ನೈ: ಕಳ್ಳಭಟ್ಟಿ ಪ್ಯಾಕೆಟ್‌ ಸಾರಾಯಿ ಕುಡಿದು ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 65ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಗಂಭೀರವಾಗಿರುವ 18 ಮಂದಿಯನ್ನು ಪುದುಚೆರಿಯ ಜಿಪ್ಮರ್‌, 6 ಮಂದಿಯನ್ನು ಸೇಲಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಈ ಘಟನೆಯೂ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ.

ಕಳ್ಳಬಟ್ಟಿಯಲ್ಲಿ ವಿಷಕಾರಿ ಮೆಥನಾಲ್ ಇರುವಿಕೆಯು ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ  ಖಚಿತವಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತ ಡಿಎಂಕೆ ಸರ್ಕಾರ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದೆ.
ಈ ಕುರಿತು ಮೃತಪಟ್ಟವರ ಕುಟುಂಬಸ್ಥರು ಮಾಧ್ಯಮಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ನನ್ನ ಮಗನಿಗೆ ತೀವ್ರ ಹೊಟ್ಟೆ ನೋವು ಕಂಡು ಬಂದಿತ್ತು. ಅವನಿಗೆ ಕಣ್ಣು ತೆರೆಯಲೂ ಆಗುತ್ತಿರಲಿಲ್ಲ, ಏನಾದರೂ ಹೇಳಿದರೆ ಕಿವಿಯೂ ಕೇಳಿಸುತ್ತಿರಲಿಲ್ಲ. ಆಸ್ಪತ್ರೆಗೆ ಹೋದರೆ ಮದ್ಯಪಾನ ಮಾಡಿದ್ದಾನೆಂದು ದಾಖಲಿಸಲೂ ನಿರಾಕರಿಸಿದರು. ರಾಜ್ಯ ಸರ್ಕಾರ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES