ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಇಂದು ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ಆಗಮಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ ಪ್ರಕಣದ ಎ2 ಆರೋಪಿಯಾಗಿರು ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮುಗಿಸಿ ಬಳಿಕ ಪರಪ್ಪನ ಅಗ್ರಹಾರದ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ: ದರ್ಶನ್, ಭವಾನಿ, ಪ್ರಜ್ವಲ್, ಸೂರಜ್ ಫೋಟೋ ವೈರಲ್
ಈ ನಡುವೆ ಕಳೆದ ಎರಡು ದಿನಗಳಿಂದ ಆಪ್ತರು, ಕುಟುಂಬಸ್ಥರು ನಟ ದರ್ಶನ್ ಭೇಟಿಗೆ ಆಗಮಿಸುತ್ತಿದ್ದಾರೆ, ನಟ ವಿನೋದ್ ಪ್ರಭಾಕರ್ ಇಂದು ಮಧ್ಯಾಹ್ನ ಪರಪ್ಪನ ಅಗ್ರಹಾರದ ಬಳಿ ಸ್ನೇಹಿತರ ಜೊತೆ ಆಗಮಿಸಿದ್ದು ಚೆಕ್ಪೋಸ್ಟ್ ಮೂಲಕ ಒಳಗೆ ಹೋದ ಅವರು ದರ್ಶನ್ ಭೇಟಿಗೆ ಮುಂದಾಗಿದ್ದಾರೆ. ಅವರ ಕುಟುಂಬಸ್ಥರಿಗಷ್ಟೆ ಸದ್ಯ ದರ್ಶನ್ ಭೇಟಿಗೆ ಅವಕಾಶ ನೀಡುತ್ತಿದ್ದು ನಮಗೆ ಭೇಟಿ ಅವಕಾಶ ಇದೆಯೋ ಇಲ್ವೋ ನೋಡಬೇಕು ಎಂದು ಈ ವೇಳೆ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದಾರೆ.