ಉಡುಪಿ: ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳು ಜೈಲು ಸಿಬ್ಬಂದಿಗಳ ಮೇಲೆ ಅಡುಗೆ ಮನೆಯಲ್ಲಿದ್ದ ದೊಡ್ಡ ಸೌಟು ಹಾಗು ಚಹಾ ಪಾತ್ರೆಯಿಂದ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಮೊಹಮ್ಮದ್ ಆಶಿಕ್, ಮೊಹಮ್ಮದ್ ಸಕ್ಲೇನ್ ಹಲ್ಲೆ ನಡೆಸಿದ ವಿಚಾರಣಾಧೀನ ಖೈದಿಗಳು, ಜೈಲರ್ ಎಸ್.ಎ.ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: ಉಮಾಪತಿ ಹಾಗು ಪ್ರಥಮ್ಗೆ ಬೆದರಿಕೆ ಹಾಕಿದ್ದ ದರ್ಶನ್ ಅಂದಾಭಿಮಾನಿ ಅರೆಸ್ಟ್: ಕ್ಷಮೆ ಕೋರಿದ ವೀಡಿಯೋ ವೈರಲ್
ಘಟನೆಯ ಹಿನ್ನೆಲೆ:
ಕೆಲ ದಿನಗಳ ಹಿಂದೆ ಉಡುಪಿಯ ಬೀದಿಗಳಲ್ಲಿ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ಬಂಧನವಾಗಿದ್ದ ಆರೋಪಿಗಳಾದ ಮೊಹಮ್ಮದ್ ಆಶಿಕ್, ಮೊಹಮ್ಮದ್ ಸಕ್ಲೇನ್ ಇವರನ್ನು ಉಡುಪಿಯ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಜೈಲಿನಲ್ಲಿ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ತಗಾದೆ ತೆಗೆದ ಕೈದಿಗಳು ಜೈಲರ್ ಎಸ್.ಎ.ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬಳಿಕ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಲ್ಲೆ ಯತ್ನಿಸಿ ಅಡುಗೆ ಮನೆಯಲ್ಲಿದ್ದ ದೊಡ್ಡ ಸೌಟು ಹಾಗು ಚಹಾ ಪಾತ್ರೆಯಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗೆ ಹಲ್ಲೆ ಯತ್ನಿಸಿದ್ದಾರೆ.