ನವದೆಹಲಿ: ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಪ್ರತಿಕ್ರಿಯೆ ನಿಡಿದ್ದೂ, ಅಭ್ಯರ್ಥಿ ಆಯ್ಕೆಯ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ದೆಹಲಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಥವ ಬಿಜೆಪಿ ಅಭ್ಯರ್ಥಿ ಅಂತಲ್ಲ, NDA ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!
ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ-ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ ಎಂದು ಅವರು ಹೇಳಿದರು.