ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಿರ್ಮಾಪಕ ಮಿಲನ ಪ್ರಕಾಶ್ ಅವರಿಗೆ ಪೊಲೀಸರು ನೋಟೀಸ್ ನೀಡಿದ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾದರು.
ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಕಾಟೇರ ಚಿತ್ರದ ಬಳಿಕ ಬಿಗ್ ಬಜೆಟ್ ಸಿನಿಮಾ ಡೆವಿಲ್ ನಲ್ಲಿ ನಟನೆ ಮಾಡುತ್ತಿದ್ದು ಈ ಚಿತ್ರಕ್ಕೆ ಮಿಲನಾ ಪ್ರಕಾಶ್ ನಿರ್ಮಾಪಕರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ಮುನ್ನ ಮತ್ತು ನಂತರ ಇದೇ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ಭಾಗಿಯಾಗಿದ್ದರು. ಈ ಹಿನ್ನೆಲೆ ಹೆಚ್ಚಿನ ವಿಚಾರಣೆಗಾಗಿ ಇಂದು ನಿರ್ಮಾಪಕ ಮಿಲನ ಪ್ರಕಾಶ್ಪೊಲೀಸ್ರ ಮುಂದೆ ಹಾಜರಾಗಿದ್ದರು.
ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿ ನಾನೇ- ಸಿ.ಪಿ ಯೋಗೇಶ್ವರ್
ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಮಾಡುತ್ತಿರುವ ವಿಜಯನಗರದ ಎಸಿಪಿ ಚಂದನ್ ಕುಮಾರ್ ಅವರು ನೀಡಿದ ನೋಟೀಸ್ ಹಿನ್ನೆಲೆ ಇಂದು ವಿಜಯನಗರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.