ವಿಜಯಪುರ: ಆಗಸ್ಟ್ನಲ್ಲಿ ಮೋದಿ ಸರ್ಕಾರ ಪತನವಾಗಲಿದೆ ಎಂದು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ನೀಡಿರುವ ಹೇಳಿಕೆಗೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಲಾಲು ಪ್ರಸಾದ್ ಅವರು ಹಗಲು ಕನಸು ಕಾಣುತ್ತಿದ್ದಾರೆ, ಅವರ ಕನಸು ನನಸಾಗಲು ಸಾಧ್ಯವೇ ಇಲ್ಲ, ಲಾಲು ಪ್ರಸಾದ್ ಅವರದ್ದು ನರಿ ಬುದ್ದಿ ಎಂದು ಕಿಡಿಕಾರಿದರು.
ಇದನ್ನೂ ಓದಿ: ಆಮ್ಲೆಟ್ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ
ಬಳಿಕ, ರಾಹುಲ್ ಗಾಂಧಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಅರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಒಬ್ಬರು ಅಪ್ರಬುದ್ದ ನಾಯಕ, ಅರೆಬರೆ ಬೆಂದಿರುವ ನಾಯಕ, ಅವರಿಗೆ ಈ ದೇಶದ ಭಾವನೆ, ಸಂಸ್ಕೃತಿ ಗೊತ್ತಿಲ್ಲ, ಹಿಂದೂಗಳ ಬಗ್ಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡುತ್ತಾರೆ, ಅದನ್ನು ನಾವು ಈಗಾಗಲೇ ಖಂಡಿಸಿದ್ದೇವೆ, ಈಗಲೂ ಖಂಡಿಸುತ್ತೇವೆ. ಅವರ ಹೇಳಿಕೆ ಕುರಿತು ಈಗಲೂ ಕ್ಷಮೆ ಯಾಚನೆ ಮಾಡಬೇಕು ಎಂದರು.