ಬೆಂಗಳೂರು: ನೂತನ ಸಂಸದ ಡಾ.ಕೆ.ಸುಧಾಕರ್ ಬೆಂಗಳೂರಿನ ನೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಬಾಡೂಟದ ಜೊತೆಯಲ್ಲಿ ಮದ್ಯ ಹಂಚಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಚಿಕ್ಕಬಳ್ಳಾಪರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ್ದಾರೆ. 20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮಧ್ಯ ಹಂಚಿ ರಾಜಕಾರಣ ಮಾಡಿಲ್ಲ. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ಘಟನೆ ಬಗ್ಗೆ ತಿಳಿಯಿತು. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜನೆ ಮಾಡಿದ್ರು ಎಂದರು.
ನಾನು ಹಾಗೂ ಆರ್. ಆಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸಭೆಯಲ್ಲಿ ಮಾತನಾಡಿ ಬಂದೆ. ಆದರೆ ಮದ್ಯ ಹಂಚಿಕೆ ಮಾಡಿದ್ದು ಆಯೋಜಕರಾ..? ಅಥವಾ ಅಲ್ಲಿ ಬಂದಿದ್ದವರೇ ಸೇವನೆ ಮಾಡಿದ್ರಾ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಮೇಲೆರಗಿದ ಕಾಮುಕ ‘ಪಾಸ್ಟರ್’
ನಮ್ಮದೇ ಕಾರ್ಯಕರ್ತರು ಮದ್ಯ ಹಂಚಿಕೆ ಮಾಡಿದ್ರೆ ಅದು ತಪ್ಪು. 20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ, ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ, ನನಗೂ ನೋವಾಗಿದೆ ಇದು ಅಕ್ಷಮ್ಯ ಅಪರಾಧ ಎಂದರು.