Sunday, October 6, 2024

ರೇಣುಕಾ ಹತ್ಯೆಯಾಗಿ 1 ತಿಂಗಳು; ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಲು ಸಜ್ಜು

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್​​​ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, ವರದಿ ಬರಬೇಕು. ಇನ್ನುಳಿದಂತೆ ಕೇಸ್‍ನಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ್ದವರ ವಿಚಾರಣೆ ನಡೆಸಲಾಗುತ್ತಿದೆ. ಹಣ ಕೊಟ್ಟ ಮೋಹನ್ ರಾಜ್, ಡೆವಿಲ್ ನಿರ್ಮಾಪಕ ಮಿಲನ ಪ್ರಕಾಶ್, ಪವಿತ್ರಾ ಆಪ್ತೆ ಸಮತಾ, ಶಾಸಕರ ಕಾರು ಚಾಲಕ ಕಾರ್ತಿಕ್‍ಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರೀ ಮಳೆ

ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಆರೋಪಿಸಿ ನಟ ದರ್ಶನ್ ಮತ್ತು ಗ್ಯಾಂಗ್ ಇದೇ ದಿನ ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿತ್ತು. ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್‍ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

RELATED ARTICLES

Related Articles

TRENDING ARTICLES