ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಖಂಡಿಸಿದ್ದು, ಹೇಡಿತನದ ಕೃತ್ಯ ಎಂದಿದ್ದಾರೆ.
ಇದನ್ನೂ ಓದಿ: ಕೋಟ್ಯಂತರ ಯುವ ಜನತೆಯ ಕನಸು ಭಗ್ನಗೊಳಿಸಿದ ಮೋದಿ: ಖರ್ಗೆ
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ವೀರ ಯೋಧರ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
The attack on a convoy of Army personnel in Kathua district of Jammu and Kashmir by terrorists is a cowardly act that deserves condemnation and firm counter-measures. My sympathies are with the families of the bravehearts who laid down their lives in this ongoing war against…
— President of India (@rashtrapatibhvn) July 9, 2024
ಈ ಘಟನೆಗೆ ತಕ್ಕ ಉತ್ತರ ನೀಡುವುದು ಅವಶ್ಯಕವಾಗಿದೆ ಎಂದು ರಾಷ್ಟ್ರಪತಿ ಮುರ್ಮು ಪ್ರತಿಪಾದಿಸಿದರು.
ಸೋಮವಾರ (ಜು.9) ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ. ಮಚೇಡಿ-ಕಿಂಡ್ಲಿ-ಮೊಲ್ದಾರ್ ರಸ್ತೆಯಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗ ಭಯೋತ್ಪಾದಕರು ಗ್ರೆನೇಡ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಐವರು ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.