ಚಿಕ್ಕಮಗಳೂರು: ನಿಷೇಧಿತ ಪ್ರದೇಶದಲ್ಲಿ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರ ಬಟ್ಟೆಗಳನ್ನು ಪೊಲೀಸರು ಹೊತ್ತೊಯ್ಯುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಘಟನೆ ನಡೆದಿದೆ. ಘಾಟ್ ನ ಜಲಪಾತದ ಬಳಿಗೆ ತೆರಳುವುದು ನಿಷೇಧವಿದ್ದರೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತದ ಬಳಿ ತೆರಳಿ ಹುಚ್ಚಾಟ ಮೆರೆಯುತ್ತಿದ್ದಾರೆ. ಈ ಹಿನ್ನೆಲೆ ಬಣಕಲ್ ಗಸ್ತು ತಿರುಗುತ್ತಿದ್ದ ಪೊಲೀಸರು ಪ್ರವಾಸಿಗರ ಬಟ್ಟೆಗಳನ್ನು ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ED ವಶಕ್ಕೆ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಆರಂಭದಲ್ಲಿ ಪ್ಲೀಸ್ ಸರ್..ಪ್ಲೀಸ್ ಎಂದು ಪೊಲೀಸರನ್ನು ಯುವಕರು ಬೇಡಿಕೊಂಡಿದ್ದಾರೆ. ಬಳಿಕ ಇದೇ ವಿಚಾರವಾಗಿ ಪೊಲೀಸರು ಮತ್ತು ಪ್ರವಾಸಿಗರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ. ಪೊಲೀಸರಿಗೆ ಆವಾಜ್ ಹಾಕಿ ಯುವಕರು ಪೇಚಿಗೆ ಸಿಲುಕಿದ್ದಾರೆ. ಕೊನೆಗೆ ಸ್ವಲ್ಪ ಸಮಯದ ನಂತರ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ ಪೊಲೀಸರು ಬಟ್ಟೆಗಳನ್ನು ವಾಪಾಸ್ ನೀಡಿ ಕಳಿಸಿದ್ದಾರೆ.