ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದ ಕುರಿತು ಸ್ಯಾಂಡಲ್ವುಡ್ ನಟ ಸದ್ಯ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ. ತಪ್ಪು ಮಾಡಿದ್ರೆ ಖಂಡಿತಾ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಅಲ್ಲಿ ಒಂದು ದುರಂತ ಆಗಿದೆ. ಜೀವ ಹೋಗಿದೆ. ಆ ವ್ಯಕ್ತಿಯ ಪೋಷಕರು ಮತ್ತು ಹೆಂಡತಿನಾ ನೋಡಿದಾಗ ಬೇಜಾರಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಆ ಜೀವಕ್ಕೆ ಏನು ನ್ಯಾಯ ಸಿಗಬೇಕೋ, ಆ ನ್ಯಾಯ ಸಿಗಲೇಬೇಕು. ಹಾಗೆಯೇ ಆರೋಪಿ ಸ್ಥಾನದಲ್ಲಿರುವವರು ನಮ್ಮವರೇ ಆಗಿದ್ದಾಗ ನಿಜಕ್ಕೂ ಬೇಜಾರಾಗುತ್ತೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿ.ಕೆ.ಶಿ
ಈ ಸುದ್ದಿ ಕೇಳಿದಾಗ ಶಾಕ್ ಆಯ್ತು. ಈ ಪ್ರಕರಣದಲ್ಲಿ ನಾವು ಪ್ರೀತಿಸಿದ ವ್ಯಕ್ತಿಯ ಹೆಸರು ಬಂದಾಗ ಬೇಜಾರಾಯಿತು. ಇಲ್ಲಿ ಯಾವುದನ್ನು ನಾವು ಸಮರ್ಥನೆ ಮಾಡಿಕೊಳ್ಳೋಕೆ ಆಗಲ್ಲ. ಎಲ್ಲದಕ್ಕೂ ಇಲ್ಲಿ ಕಾನೂನು ಇದೆ. ಅದಕ್ಕಿಂತ ದೊಡ್ಡವರು ಯಾರು ಇಲ್ಲ. ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ. ಅಲ್ಲಿ ನಿಜಕ್ಕೂ ಏನು ಆಗಿದೆ ನಮಗೆ ಗೊತ್ತಿಲ್ಲ. ಕೆಲವೊಂದನ್ನು ನಾವು ಒಂಟಿಯಾಗಿಯೇ ಫೈಟ್ ಮಾಡಬೇಕಾಗುತ್ತದೆ ಎಂದು ಹೇಳಿದ್ರು.