ಬೀದರ್: ಕರ್ತವ್ಯ ನಿರತ ಶಿರಸ್ತೆದಾರ್ ಮೇಲೆ ಹಾಡಹಗಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿರುವ ಘಟನೆ ಬೀದರ್ ತಹಶಿಲ್ದಾರ್ ಕಚೇರಿಯಲ್ಲಿ ಇಂದು ನಡೆದಿದೆ.
ಇದನ್ನೂ ಓದಿ: ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಅನಿಲ್ ಕುಮಾರ್ ವ್ಯಾಸ್ ಚಾಕು ಇರಿತಕ್ಕೆ ಒಳಗಾದ ಶಿರಸ್ತೆದಾರ್, ಅಮನ್ ಜುಬೇರ್ ಹಲ್ಲೆ ನಡೆಸಿ ಪರಾರಿಯಾದ ವ್ಯಕ್ತಿ. ಸದ್ಯ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಡಗೈ ಭುಜಕ್ಕೆ ಗಂಭೀರ ಗಾಯಗಳಾಗಿರುವ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಹಲ್ಲೆ ಹಾಗು ಚಾಕು ಇರಿತಕ್ಕೆ ಪ್ರಮುಖ ಕಾರಣವೇನೆಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ, ಈ ಘಟನೆಯೂ ಬೀದರ್ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.