ಹೊಸಕೋಟೆ: ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಲಾಂಗು, ಮಚ್ಚು ಬೀಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಗಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಬೈಕ್ಗೆ ರೆಡಿ ಮಿಕ್ಸ್ ಸಿಮೆಂಟ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!
ಭಾರ್ಗವ (24) ಕೊಲೆಯಾದ ಯುವಕ, ಶುಕ್ರವಾರ ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಕಾರ್ ಚೇಸ್ ಮಾಡಿ ಕಾರಿನ ಮುಂದೆ ಬಂದು ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರಿನ ಮುಂಭಾಗ ಹಂತಕರ ವಾಹನಕ್ಕೆ ಡಿಕ್ಕಿಯಾಗಿದೆ. ಇದನ್ನೇ ನೆಪಮಾಡಿ ಗಲಾಟೆ ಮಾಡಿದ ಆಗಂತುಕರು ಲಾಂಗು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಘಟನೆ ಸಂಬಂಧ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಕಲಾಗಿದೆ.