Friday, September 20, 2024

14 ದಿನಗಳ ಕಾಲ ದರ್ಶನ್​ ಬಂಧನ ವಿಸ್ತರಣೆ: ಕೋರ್ಟ್​ ಆದೇಶ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್​ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

ಇದನ್ನೂ  ಓದಿ: ಏಕಾದಶಿ ಪ್ರಯುಕ್ತ ಅಪ್ಪುಗೆ ಫೋಟೋ ಮುಂದೆ ಎಡೆ ಇಟ್ಟು ಸದ್ಗತಿ ಪೂಜೆ ಸಲ್ಲಿಸಿದ ಅಭಿಮಾನಿ ಕುಟುಂಬ

ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ‌ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES