ಬೆಂಗಳೂರು: ಕೋರಮಂಗಲದ ವಿಆರ್ ಲೇಔಟ್ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕೃತಿ ಕುಮಾರಿ ಕೊಲೆಯಾದ ಯುವತಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೃತಿ ಕುಮಾರಿಯನ್ನು ರಾತ್ರಿ ಸುಮಾರು ಹತ್ಯೆ ಮಾಡಲಾಗಿದೆ. ರಾತ್ರಿ 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದಾನೆ. 3ನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಕೃತಿ ಕುಮಾರಿ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಸಿಎಂಗೆ ಬಂಧನ ಭೀತಿ, ಡಿಕೆಶಿಗೆ ಗಂಢಾಂತರ, ರೇವಣ್ಣಗೆ ರಿಲೀಫ್: ಶ್ರೀಗಳ ಕಾಲಜ್ಞಾನ ಭವಿಷ್ಯ
ಪರಿಚಯಸ್ಥ ಯುವಕನಿಂದಲೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.