ನೇಪಾಳ (ಕಠ್ಮಂಡು): ಟೇಕ್ ಆಪ್ ಆಗುವ ವೇಳೆ ವಿಮಾನವೊಂದು ಪತನವಾಗಿರುವ ಘಟನೆ ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ನಡೆದಿದೆ. 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಸದ್ಯ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ಸರಿಯಾಗಿ ತೀರ್ಪು ಕೊಟ್ಟಿಲ್ಲ ಎಂದು ಗರಂ ಆದ ಯುವಕರು: ಮಾರಕಾಸ್ತ್ರ ಹಿಡಿದು ದಾಂಧಲೆ
ಸೂರ್ಯ ಏರ್ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು ಎಂದು ಮೂಲಗಳು ತಿಳಿಸಿದೆ. ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಸಾವು ನೋವುಗಳ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
ಪತನದ ನಂತರ ವಿಮಾನದಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.