ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಸಾರಿಗೆ ಇಲಾಖೆಗೆ ಶಕ್ತಿ ಯೋಜನೆಯಡಿ 1,413 ಕೋಟಿ ರೂ. ಬಾಕಿ ಹಣ ಕೊಡಬೇಕು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಇದನ್ನೂ ಓದಿ: ವಿಜಯಲಕ್ಷ್ಮಿ ಭೇಟಿ ಬಳಿಕ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ!
ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಿ, ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಶಕ್ತಿ ಹಣ ಬಾಕಿ ಇದೆ. ಶಕ್ತಿ ಯೋಜನೆ ಪ್ರಾರಂಭ ಆದಾಗ ನಿತ್ಯ 80 ಲಕ್ಷ ಜನ ಸಂಚಾರ ಮಾಡ್ತಿದ್ದರು ಹೀಗಾಗಿ ಮೊದಲು 3,200 ಕೋಟಿ ರೂ. ಶಕ್ತಿಗೆ ಅನುದಾನ ಇಡಲಾಗಿತ್ತು. ಶಕ್ತಿ ಯೋಜನೆ ಪ್ರಾರಂಭ ಮಾಡಿದ ನಂತರ 1 ಕೋಟಿ ನಿತ್ಯ ಒಡಾಟ ಆಯ್ತು. ಹೀಗಾಗಿ ಹಣದ ಹೆಚ್ಚುವರಿಯಾಗಿ ನೀಡಲು ಆಗಿಲ್ಲ. ಬಜೆಟ್ ನಲ್ಲಿ 5,015 ಕೋಟಿ ರೂ. ಇಡಲಾಗಿದೆ. ಸರ್ಕಾರದಿಂದ 1,413.47 ಕೋಟಿ ರೂ. ಬಾಕಿ ಇದೆ. ಹಣ ಬಿಡುಗಡೆ ಮಾಡುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇವೆ. ಹಣ ಬಿಡುಗಡೆ ಮಾಡಿದ ಮೇಲೆ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡೋದಾಗಿ ತಿಳಿಸಿದರು.