ರಾಮನಗರ: ಪೊಲೀಸರ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳೆಯೊರ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಜಿಲ್ಲೆಯ ಐಜೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟು, ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ನಿರೀಕ್ಷಣಾ ಜಾಮೀನಿನ ಮೇಲಿದ್ದ ಮಹಾಲಿಂಗು ಎಂಬಾತನನ್ನ ಐಜೂರು ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಠಾಣೆಗೆ ಜಾಮೀನು ಪತ್ರ ನೀಡಿಲ್ಲವೆಂದು ಆರೋಪಿಸಿ ಮಹಾಲಿಂಗುನನ್ನ ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ರಣ ಮಳೆ: ಬೆಳಗಾವಿಯ 6 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಉದ್ದೇಶ ಪೂರ್ವಕವಾಗಿ, ದ್ವೇಷದಿಂದ ನನ್ನ ಪತಿಯನ್ನ ಬಂಧಿಸಿದ್ದಾರೆಂದು ಪತ್ನಿ ಆರೋಪಿಸಿದ್ದರು. ನನ್ನ ಗಂಡನಿಗೆ ಪಿಎಸ್ಐ ತನ್ವೀರ್ ಟಾರ್ಗೆಟ್ ಮಾಡಿದ್ದಾರೆ. ನನ್ನ ಗಂಡನಿಗೆ ಆರೋಗ್ಯ ಸರಿಯಿಲ್ಲ, ದ್ವೇಷದಿಂದ ಅವರನ್ನ ಬಂಧಿಸಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಮಹಿಳೆಗೆ ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.