ಬೆಂಗಳೂರು: ಜುಲೈ 30ರಿಂದ ರಾಜ್ಯ ಬಿಜೆಪಿ ಪಕ್ಷವು ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು ಈ ಪಾದಯಾತ್ರೆಗೆ ಕೌಂಟರ್ ಪಾದಯಾತ್ರೆ ಮಾಡಲು ಉದ್ದೇಶಿಸಿದ್ದ ಕಾಂಗ್ರೆಸ್ ಪಕ್ಷವು ಸದ್ಯ ಈ ಕಾರ್ಯಕ್ರಮವನ್ನು ಕೈಬಿಟ್ಟಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಗರದ ವಿಧಾನಸೌಧದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಬೇಕಾದರೇ ಪಾದಯಾತ್ರೆಯನ್ನು ಮಾಡಲಿ, ನಾವು ನಮ್ಮದೇ ಆದ ರೀತಿಯಲ್ಲಿ ಅದಕ್ಕೆ ತಿರುಗೇಟನ್ನು ನೀಡುತ್ತೇವೆ. ಬಿಜೆಪಿಯವರು ಮಾಡಲು ಉದ್ದೇಶಿಸಿರುವ ಪಾದಯಾತ್ರೆಯಲ್ಲಿ ಸದುದ್ದೇಶ ಇಲ್ಲ, ಬರೀ ರಾಜಕೀಯವಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ:ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ