ಬೆಂಗಳೂರು: ಜಿ.ಟಿ.ದೇವೇಗೌಡರಿಗೆ ಮುಡಾದಿಂದ ಜಮೀನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಪತ್ರಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸಚಿವರು ಹೇಳಿರುವಂತೆ ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ. ನನ್ನ 50-60 ವರ್ಷಗಳ ರಾಜಕಾರಣದಲ್ಲಿ ಯಾವುದೇ ಕಟ್ಟಡ ಕಟ್ಟಲು ಆಗಿಲ್ಲ. ಬಂಗಾರದ ಮನುಷ್ಯ ಚಲನಚಿತ್ರದಿಂದ ಪ್ರಭಾವಿತನಾಗಿ ಬೇಸಾಯ ಮಾಡಿದ್ದೇನೆ. ಆನಂತರವೂ ಕಾನೂನು ಬದ್ದವಾಗಿ ಜಮೀನು ಖರೀದಿಸಿದ್ದೇನೆ. ನನ್ನಂತಹ ರಾಜಕಾರಣಿ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್ ಯಾತ್ರೆ ರದ್ದು: ಡಿಕೆ ಶಿವಕುಮಾರ್ ಸ್ಪಷ್ಟನೆ
ಮುಡಾದ 90% ಭಾಗ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇದೆ. ಈ ಭಾಗದಲ್ಲಿ ಅಂದಿನಿಂದ ಇಂದಿನವರೆಗೂ ನಾನು ಒಂದೇ ಒಂದು ನಿವೇಶನ ಪಡೆದಿಲ್ಲ. ಗೋವಿಂದರಾಜು ಮುಡಾ ಅಧ್ಯಕ್ಷರಾಗಿದ್ದಾಗ ಲಾಟರಿಯಲ್ಲಿ ಒಂದು ನಿವೇಶನ ಬಂದಿದೆ. 50×80 ಅಳತೆಯ ನಿವೇಶನ ಲಾಟಿರಿಯಲ್ಲಿ ಬಂದಿರುವುದನ್ನು ಹೊರತುಪಡಿಸಿದರೆ ಯಾವುದೇ ಒಂದು ನಿವೇಶನ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.