Friday, September 20, 2024

ಕೇಂದ್ರ ಸಚಿವ HDK ಬಂದರೂ ಪ್ರವಾಸಿ ಮಂದಿರದ ಬೀಗ ತೆಗೆಯದ ಅಧಿಕಾರಿಗಳು!

ಮೈಸೂರು:  ನಂಜನಗೂಡು ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯಲು ಬಂದಿದ್ದ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಗೆ ಪ್ರವಾಸಿ ಮಂದಿರದ ಬಾಗಿಲು ತೆರೆಯದೇ ಸಿಬ್ಬಂದಿಗಳು ಕರ್ತವ್ಯ ಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಇಂದು ನಂಜನಗೂಡು ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಪ್ರವಾಸಿ ಮಂದಿರಕ್ಕೆ ವಿಶ್ರಾಂತಿ ಪಡೆಯಲು ಆಗಮಿಸಿದ್ದರು. ಈ ವೇಳೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ ಕುಳಿತ ಹೆಚ್‌.ಡಿ. ಕುಮಾರಸ್ವಾಮಿ 10 ನಿಮಿಷ ಕಾದರೂ ಯಾವೊಬ್ಬ ಸಿಬ್ಬಂದಿ ಬಂದಿರಲಿಲ್ಲ. ಕೊನಗೆ ಕುಮಾರಸ್ವಾಮಿ ಕಾರಿನಲ್ಲಿ ವಾಪಸ್​​​ ತೆರಳಿದ್ದಾರೆ.

ಇದನ್ನೂ ಓದಿ: KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಕಾಂಗ್ರೆಸ್​ ಸಂಸದ: ಭಾರೀ ಚರ್ಚೆಗೆ ಗ್ರಾಸವಾಯ್ತು ಸುನೀಲ್ ಬೋಸ್ ನಡೆ

ಹೆಚ್‌ಡಿಕೆ ಭೇಟಿ ವಿಚಾರವನ್ನ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಮತ್ತು ಪ್ರವಾಸ ಪಟ್ಟಿಯನ್ನು ಸಚಿವಾಲಯದ ಸಿಬ್ಬಂದಿ ಬಿಡುಗಡೆ ಮಾಡಿದ್ದರು. ಪ್ರವಾಸಿ ಮಂದಿರದ ಬಾಗಿಲು ತೆರೆಯದ್ದಕ್ಕೆ ಕಾರಿನಲ್ಲಿದ್ದ ಮಾಜಿ ಸಚಿವ ಸಾ.ರಾ. ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES