ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅವರು ಮನೆ ಊಟಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಮನೆಊಟದ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಟೀಮ್, ಇದೀಗ ಮನೆಊಟ ಪಡೆಯಲು ಹರ ಸಾಹಸ ಮಾಡುತ್ತಿದ್ದಾರೆ. ಅನಾರೋಗ್ಯದ ನೆಪವೊಡ್ಡಿ ತಮಗೆ ಮನೆಯೂಟ ನೀಡಲು ಅನುಮತಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿರುವ ಕೋರ್ಟ್ ಇಂದು ಈ ಬಗ್ಗೆ ತೀರ್ಪು ಕೊಡುವ ಸಾಧ್ಯತೆಗಳಿವೆ.
ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ತಗ್ಗಲಿದೆ ಗಾಳಿ-ಮಳೆಯ ತೀವ್ರತೆ
ಹತ್ಯೆ ಪ್ರಕರಣದ ಆರೋಪಿಗಳಿಗೆ ಮನೆಯೂಟ ಕೊಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂಬ ಕಾರಣಕ್ಕೆ ಈ ಮೊದಲು ಕೆಳ ಹಂತದ ನ್ಯಾಯಾಲಯಗಳು ಎರಡು ಬಾರಿ ದರ್ಶನ್ ಮನವಿಯನ್ನು ತಿರಿಸ್ಕರಿಸಿವೆ. ಆದರೂ ದರ್ಶನ್ ಮತ್ತು ಅವರ ತಂಡ ಛಲಬಿಡದೆ, ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ವೈದ್ಯರ ಸಲಹೆಯಂತೆ ಜೈಲಿನಲ್ಲೇ ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ. ಹಾಗಾಗಿ ಕಾನೂನು ಮೀರಿ ಅವರಿಗೆ ಮನೆಯೂಟದ ವ್ಯವಸ್ಥೆ ಮಾಡುವ ಅಗತ್ಯವಿಲ್ಲವೆಂದು ಸರ್ಕಾರದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದಿಸಿದ್ದರು. ಎರಡೂ ಕಡೆಯ ವಾದ ವಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಇಂದಿಗೆ ತಮ್ಮ ತೀರ್ಪು ಕಾಯ್ದಿರಿಸಿದ್ದರು.