Friday, September 20, 2024

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಶಕ್ತಿಪ್ರದರ್ಶನ

ರಾಮನಗರ: ಒಂದೆಡೆ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಮಾಡ್ತಿದ್ರೆ, ಇತ್ತ ಕಾಂಗ್ರೆಸ್​​​ ಜನಾಂದೋಲನ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ.

ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ ಮಾಡಲಿದೆ. ಚನ್ನಪಟ್ಟಣ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಜನಾಂದೋಲನ ಸಮಾವೇಶ ನಡೆಯಲಿದ್ದು, ಸಾವಿರಾರು ಜನರು ಭಾಗಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೇರಳದಲ್ಲಿ ಗುಡ್ಡ ಕುಸಿತ: 330ಕ್ಕೇರಿದ ಸಾವಿನ ಸಂಖ್ಯೆ

ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ರಹೀಂ ಖಾನ್, ಕೆ.ಜೆ.ಜಾರ್ಜ್, ಜಮೀರ್ ಅಹಮ್ಮದ್ ಖಾನ್, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಜನಾಂದೋಲನ ಸಮಾವೇಶದ ಜೊತೆಗೆ ಉಪಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ. ಇನ್ನು ಕೇಂದ್ರ ಸಚಿವ H.D.ಕುಮಾರಸ್ವಾಮಿ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದರು. ಈ ಹಿನ್ನೆಲೆ ಒಂದು ಡಿಕೆಶಿ ಅಬ್ಬರಿಸುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES