ರಾಮನಗರ: ಜೆಡಿಎಸ್- ಬಿಜೆಪಿ ಪಕ್ಷದವರಿಗೆ ತಿರುಗೇಟು ನೀಡಲು ಕಾಂಗ್ರೆಸ್ ಜನಾಂದೋಲನ ಸಮಾವೇಶ ಮಾಡ್ತಿದೆ ಅಂತಾ ಚನ್ನಪಟ್ಟಣದಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.
ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅವರು, ಪಾದಯಾತ್ರೆ ಮೂಲಕ ರಾಜ್ಯದ ಜನರಿಗೆ ಸುಳ್ಳು ಹೇಳೊಕೆ ಬಿಜೆಪಿ ಹೊರಟಿದ್ದಾರೆ. ಜೆಡಿಎಸ್-ಬಿಜೆಪಿ ಅವರು ಅಪವಿತ್ರ ಮೈತ್ರಿ ಮಾಡಿಕೊಂಡು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಜೆಡಿಎಸ್ ಪಕ್ಷದ ಸಿದ್ದಾಂತಗಳನ್ನು ಮರೆತು ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಬಿಜೆಪಿ ಅವರ ಪಾದದಡಿಯಲ್ಲಿ ಜೆಡಿಎಸ್ನವರು ಸೇರಿಕೊಂಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಕಳಂಕ ತರಬೇಕು ಅಂತಾ ಪಾದಯಾತ್ರೆ ಮಾಡ್ತಿದ್ದಾರೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮಾಡುತ್ತಿರುವುದು ಪಾದಯಾತ್ರೆಯಲ್ಲ, ಇದು ಪಾಪ ವಿಮೋಚನಾ ಪಾದಯಾತ್ರೆ.
ರಾಜಕೀಯದಲ್ಲಿ ಸ್ವಚ್ಚತೆ, ಪ್ರಾಮಾಣಿಕತೆ ಇಟ್ಟುಕೊಂಡು ಇಷ್ಟು ವರ್ಷ ಸಿದ್ದರಾಮಯ್ಯ ರಾಜಕೀಯ ಮಾಡಿದ್ದಾರೆ. ಮೈಸೂರಿಗೆ ಹೋಗೊ ವರೆಗೂ ಇದೇ ರೀತಿ ಸಮಾವೇಶ ಮಾಡ್ತೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೊ ಪ್ರಶ್ನೆಗೆ ಉತ್ತರ ಕೊಡಿ ಅಂತಾ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.‘
ಇದೇ ವೇಳೆ ಸಿದ್ದರಾಮಯ್ಯ ಮೇಲೆ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, ಮರ್ಯಾದಸ್ಥರನ್ನು ಬೀದಿಗೆ ಎಳೆಯುವಂತ ಕೆಲಸ ಮಾಡಬೇಡ, ಈ ರೀತಿಯ ಜೋಕರ್ ಕೆಲಸ ಮಾಡಬೇಡ, ನಿನಗೆ ತಾಖತ್ ಇದ್ರೆ ಬಾ, ಯಾವುದೇ ಚರ್ಚೆಗೆ ನಾನು ಸಿದ್ದನಿದ್ದೇನೆ. ಈ ಮುಡಾ ಕೇಸ್ ನಲ್ಲಿ ಒಂದೇ ಒಂದು ಆರೋಪವನ್ನು ಸಾಬೀತ್ ಮಾಡಿದರೇ ನಾನು ನಿನಗೆ ಶರಣಾಗುತ್ತೇನೆ ಇಲ್ಲ ನಿನ್ನ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ಸವಾಲ್ ಹಾಕಿದರು.