ದಕ್ಷಿಣ ಕನ್ನಡ: ಪ್ಯಾನ್ ಇಂಡಿಯಾ ಸ್ಟಾರ್ ನಟ ಯಶ್ ಇಂದು ಪತ್ನಿ ಮತ್ತು ಮಕ್ಕಳೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಾಲಯದ ನಿಯಮದಂತೆ ಪಂಚೆ, ಶರ್ಟ್ ಧರಿಸಿ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಮಣ್ಣಿನ ಹರಕೆ ಅರ್ಪಿಸಿದ್ದಾರೆ. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಕುಟುಂಬ ಸಮೇತರಾಗಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು ನೆಚ್ಚಿನ ನಟನೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು.
ಇದನ್ನೂ ಓದಿ: ಸ್ಪಂದನ ಅಗಲಿ ಇಂದಿಗೆ ಒಂದು ವರ್ಷ: ಪತ್ನಿ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ನಟ ವಿಜಯ್ ರಾಘವೇಂದ್ರ
ಇದೇ ವೇಳೆ ಟಾಕ್ಸಿಕ್ ಚಿತ್ರದ ನಿರ್ದೇಶಕ ವೆಂಕಟ್ ಕೂಡ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೆಜಿಎಫ್ ಸಿನಿಮಾದ ಬಳಿಕ ಮತ್ತೊಂದು ಬಾರಿ ಹೈ ಬಜೆಟ್ನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟ ಯಶ್ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ವೆಂಕಟ್ ಹೆಗಲ ಮೇಲಿದ್ದು, ಚಿತ್ರಕ್ಕಾಗಿ ಹೊಸ ಹೇರ್ ಸ್ಟೈಲ್ ನೊಂದಿಗೆ ಸದ್ಯ ಯಶ್ ಟ್ರೆಂಡಿಂಗ್ನಲ್ಲಿದ್ದಾರೆ.