Friday, September 20, 2024

ಆಪ್​ ಮುಖಂಡ ಮನೀಶ್​ ಸಿಸೋಡಿಯಾಗೆ ಜಾಮಿನು ಮಂಜೂರು!

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್​ ಸಿಸೋಡಿಯಾಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್​ ಸಿಸೋಡಿಯಾ ಹೊರಬರಲಿದ್ದಾರೆ.

ಇದನ್ನೂ ಓದಿ: Paris Olympics : ಭಾರತಕ್ಕೆ ಮತ್ತೊಂದು ಪ್ರಶಸ್ತಿ: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್​ ಚೋಪ್ರ

ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.

ಇದಾದ ಬಳಿಕ CBI FIR​ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್​ 9ರಂದು ಬಂಧಿಸಿತ್ತು. ಸಿಸೋಡಿಯ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್​ಗೆ ರಾಜೀನಾಮೆ ನೀಡಿದ್ದರು.

RELATED ARTICLES

Related Articles

TRENDING ARTICLES