ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಹೊರಬರಲಿದ್ದಾರೆ.
ಇದನ್ನೂ ಓದಿ: Paris Olympics : ಭಾರತಕ್ಕೆ ಮತ್ತೊಂದು ಪ್ರಶಸ್ತಿ: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರ
ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.
ಇದಾದ ಬಳಿಕ CBI FIRಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್ 9ರಂದು ಬಂಧಿಸಿತ್ತು. ಸಿಸೋಡಿಯ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್ಗೆ ರಾಜೀನಾಮೆ ನೀಡಿದ್ದರು.