ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿದೆ. ಇದರಿಂದಾಗಿ ಭಾರೀ ಪ್ರಮಾಣದಲ್ಲಿ ನೀರಿನ ಹರಿವಿರುವುದರಿಂದ ಗೇಟ್ ದುರಸ್ತಿ ಮಾಡಲು ಸಾಧ್ಯವಾಗ್ತಿಲ್ಲ. ಗೇಟ್ ದುರಸ್ತಿ ಮಾಡಬೇಕೆಂದ್ರೆ 105 ಟಿಎಂಸಿಯಲ್ಲಿ 55 ರಿಂದ 65 ಟಿಎಂಸಿವರೆಗೂ ನೀರು ಖಾಲಿ ಮಾಡಬೇಕಾಗಿದೆ.
ಸದ್ಯ ಗೇಟ್ನ ಚೈನ್ ಲಿಂಕ್ ಕಟ್ ಆಗಿರುವ ಹಿನ್ನೆಲೆ ರಾತ್ರಿಯಿಂದ 1 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಎಲ್ಲಾ ಗೇಟ್ಗಳಿಂದ ನೀರು ಹೊರ ಬಿಡಲಾಗುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ.
ಇದನ್ನೂ ಓದಿ: ಸಾವಿರಾರು ಕೋಟಿ ಹಗರಣಗಳ ತನಿಖೆಗೆ ಸಿದ್ದತೆ: ‘ದೋಸ್ತಿ’ಗೆ ಉರುಳಾಗುತ್ತಾ ಹಗರಣಗಳ ತನಿಖೆ..?
ಇತ್ತ ಗೇಟ್ ಚೈನ್ ಲಿಂಕ್ ಕಟ್ ಆದ ಹಿನ್ನೆಲೆ ತುಂಗಭದ್ರಾ ಜಲಾಶಯದ ವೈಕುಂಠ ಅಥಿತಿ ಗೃಹದಲ್ಲಿ ಅಧಿಕಾರಿಗಳು ಹೈವೋಲ್ಟೇಜ್ ಮೀಟಿಂಗ್ ಮಾಡಿದ್ದಾರೆ. ಟಿಬಿ ಬೋರ್ಡ್ ಕಾರ್ಯದರ್ಶಿ ಓಆರ್ಕೆ ರೆಡ್ಡಿ, ಎಂಡಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಟಿಬಿ ಟ್ಯಾಂ ಅಧಿಕಾರಿಗಳು ಹೈದ್ರಾಬಾದ್ಗೆ ಮಾಹಿತಿ ರವಾನಿಸಿದ್ದಾರೆ.