ಬೆಂಗಳೂರು: ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಪವರ್ ಟಿವಿ ಎಂಡಿ ಶ್ರೀಯುತ ರಾಕೇಶ್ ಶೆಟ್ಟಿಯವರಿಗೆ ‘ಫೈರ್ ಬ್ರ್ಯಾಂಡ್ ಜರ್ನಲಿಸ್ಟ್’ ಅವಾರ್ಡ್
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡಲು ಬಂದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಪ್ರೇ ಮಾಡುತ್ತಿದ್ದರು. ಇಲಿ ಪಾಷಾಣದ ವಾಸನೆಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಮಾಡಿಕೊಂಡು ಅಸ್ವಸ್ಥರಾದ 20ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಾಸ್ಟೆಲ್ ಸಿಬ್ಬಂದಿ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ನಲ್ಲಿ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿ ಮಂಜುನಾಥ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.