Thursday, September 19, 2024

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ದೇಶದಲ್ಲಿ ಕಾಂಗ್ರೆಸ್ ಕ್ಲೋಸ್​; ಕೆ.ಎಸ್​.ಈಶ್ವರಪ್ಪ​​​​​

ಹುಬ್ಬಳ್ಳಿ: ಅಕಸ್ಮಾತ್​​ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್​​ ಬಾಗಿಲು​​​​​​ ಮುಚ್ಚುತ್ತೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪರ ಬಂಡೆಯಂತೆ ನಿಲ್ಲುತ್ತೀವಿ ಎಂದು ಹೇಳುವವರು ಸಿದ್ದರಾಮಯ್ಯ ಮೇಲೆಯೇ ಬಂಡೆ ಎತ್ತಿಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅನೇಕ ಸಚಿವರು ಸೇರಿದಂತೆ ಕಾಂಗ್ರೆಸ್​​ನ ಹಲವಾರು ಶಾಸಕರಿಗೆ ಸಿಎಂ ಆಗುವ ಹಂಬಲ ಇದೆ. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಆದಿಯಾಗಿ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ. ಸಿಎಂ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ ಅಂತಾ ಅವರೆಲ್ಲಾ ಕಾಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕೇಂದ್ರದ ನಾಯಕರ ಮಾತಿಗೂ ಬೆಲೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆಗೆ ನಾನು ಅಪೇಕ್ಷೆ ಪಡಲ್ಲ ಎಂದು ಈ ವೇಳೆ ಹೇಳಿದರು. ಸಿದ್ದರಾಮಯ್ಯ ರಾಜೀನಾಮೆ ನೀಡಿ ಅವರು ಹೇಳಿದವರೇ ಸಿಎಂ ಆದರೆ ಉಳಿದ ಗುಂಪು ಸುಮ್ಮನೆ ಇರುವುದಿಲ್ಲ ಎಂದರು.

RELATED ARTICLES

Related Articles

TRENDING ARTICLES